ಬೆಳ್ತಂಗಡಿ ಯುವವಾಹಿನಿ ಘಟಕದಿಂದ ಉದಯ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

0

ಶಿಶಿಲ: ಯುವವಾಹಿನಿ ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇತ್ತೀಚೆಗೆ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿಯಲ್ಲಿ ಇರುವ ಇವರನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಸಹಾಯಧನವನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಸ್ತಾಂತರಿಸಿದರು. ಘಟಕದ ಮಾಜಿ ಅಧ್ಯಕ್ಷ ಎಂ.ಕೆ. ಪ್ರಸಾದ್, ಕೋಶಾಧಿಕಾರಿ ನಾಗೇಶ್ ಆದೇಲು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಕಳಿಯ ಹಾಗೂ ಯುವವಾಹಿನಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here