ಬೆಳ್ತಂಗಡಿ: ತಾಲೂಕು ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನವನ್ನು ಸರ್ಕಾರ ಮಂಜೂರುಗೊಳಿಸಿದ್ದು, ಅನುದಾನ ಮಂಜೂರುಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಜು.10ರಂದು ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್. ನಾಗೇಶ್ ಕುಮಾರ್ ಗೌಡ, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯ ಶ್ರೀಧರ್ ಕಳೆಂಜ, ತಾಲೂಕು ಗ್ಯಾರಂಟಿ ಅನು ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ನೇಮಿರಾಜ ಕಿಲ್ಲೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಬೆಳ್ತಂಗಡಿ: ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು: ಸಚಿವರಿಗೆ ಅಭಿನಂದನೆ