ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ಸಾವು

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಮೂಲತಃ ಹಾಸನ ಜಿಲ್ಲೆಯವರಾದ ಸತೀಶ್(46) ಜು. 15ರಂದು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಕುಸಿದು ಬಿದ್ದ ಸತೀಶ್‌ ಅವರನ್ನು ಪತ್ನಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಸತೀಶ್ ಮೂಲತಃ ಹಾಸನ ಜಿಲ್ಲೆಯವರು ಲಾಯಿಲದಲ್ಲಿ ಬಾಡಿಗೆ ಮನೆ ಮಾಡಿದ್ದರು. ಮೃತರು ಪತ್ನಿ, ಮಗನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here