ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣ: ಮಾಸ್ಕ್ ಮ್ಯಾನ್, ಪುತ್ತೂರು ಎಸಿ, ಅರಣ್ಯ ಇಲಾಖೆ, ವಿವಿಧ ಅಧಿಕಾರಿಗಳು ಎಸ್.ಐ.ಟಿ ಕಚೇರಿಗೆ ಆಗಮನ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.2ರಂದು ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಎಸ್.ಐ.ಟಿ ಕಚೇರಿಗೆ ಮಾಸ್ಕ್ ಮ್ಯಾನ್, ಪುತ್ತೂರು ಸಹಾಯಕ ಆಯುಕ್ತ ಸ್ವೆಲ್ಲಾ ವರ್ಗೀಸ್, ಅರಣ್ಯ ಇಲಾಖೆ ಅಧಿಕಾರಿಗಳು ಎಸ್. ಐ. ಟಿ ಕಚೇರಿಗೆ ಭೇಟಿ ನೀಡಿದ್ದಾರೆ‌. ಅನಾಮಿಕ ವ್ಯಕ್ತಿಯನ್ನು ಇಂದು ಕೂಡ ಧರ್ಮಸ್ಥಳ ಸಮಾಧಿ ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಹೋಗಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯ ನಡೆಯಲಿದೆ.

LEAVE A REPLY

Please enter your comment!
Please enter your name here