ಧರ್ಮಸ್ಥಳದ ಬೊಳಿಯಾರ್ ಗೋಂಕ್ರತಾರ್ ನ ಸಮೀಪ ಗುರುತು 15-ಉತ್ಖನನ ಕಾರ್ಯಕ್ಕೆ ಚಾಲನೆ

0

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 8ರಂದು ಮುಸುಕುಧಾರಿ ಸ್ಥಳ ಗುರುತಿಸಿ ಉತ್ಖನನ ಕಾರ್ಯಕ್ಕೆ ಮುಂದಾಗಿದೆ.

ಧರ್ಮಸ್ಥಳದಿಂದ ಮೂರು ಕಿ.ಮೀ. ದೂರದಲ್ಲಿರುವ ಗೋಂಕ್ರಥಾರ್ ಅರಣ್ಯ ಭಾಗ ರಸ್ತೆಯಿಂದ ಐನೂರು ಮೀಟರ್ ದೂರದಲ್ಲಿರುವ ಸ್ಪಾಟ್ ಆಗಿದೆ. ಇಂದೇ ಸ್ಥಳ ಗುರುತು ಮಾಡಿ ಇಂದೇ ಸ್ಥಳ ಉತ್ಖನನ.
ಹೊಸ ಸ್ಥಳದ ಬಗ್ಗೆ ಕುತೂಹಲ ಸೃಷ್ಠಿ ಉಂಟುಮಾಡಿದೆ. ನಿಗೂಢವಾಗಿ ಸಾವನ್ನಪ್ಪಿದ ಪದ್ಮಲತಾ ಎಂಬುವವರ ಮನೆಗೆ ಸಂಪರ್ಕದ ದಾರಿಯಲ್ಲಿ ಅನಾಮಿಕ ತೆರಳಿದ್ದಾರೆ.

ಗುರುತು 15ನೇ ಸ್ಥಳದತ್ತ ಕಾರ್ಮಿಕರಿಂದ ಹಾರೆ ಪಿಕ್ಕಾಸು, ಉಪ್ಪಿನ ಮೂಟೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಎಸಿ ಸ್ಟೆಲ್ಲಾ ವರ್ಗೀಸ್, ಎಸ್ಪಿ ಜಿತೇಂದ್ರ ಕುಮಾರ್ ದಯಾಮಾ, ಎಸ್. ಎಸ್. ಎಲ್. ಸೋಕೋ, ಪೊಲೀಸರು ಒಳಗೊಂಡ ಎಸ್.ಐ. ಟಿ ತಂಡ ತೆರಳಿದ್ದಾರೆ. ಸ್ಥಳಕ್ಕೆ ಯಾರೂ ಹೋಗದಂತೆ ಪೊಲೀಸರ ಭದ್ರತೆ ಸ್ಥಳದಲ್ಲಿ ಸುಮಾರು 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here