ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

0

ಪಡoಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 10ರಂದು ಪಡoಗಡಿ ಮತ್ತು ಗರ್ಡಾಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಪಡoಗಡಿ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತ ಅಣ್ಣಿಮೂಲ್ಯ ಕಾಜಿನಡ್ಕ ಉದ್ಘಾಟಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಅವರು ಉದ್ಘಾಟನಾ ಭಾಷಣ ಮಾಡಿದರು. ಶಾಸಕ ಹರೀಶ್ ಪೂಂಜ ಅವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು,ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ,ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಅಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು ಬೈಠಕ್ ನೀಡಿದರು. ಪಡoಗಡಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗರ್ಡಾಡಿ ಶಕ್ತಿ ಕೇಂದ್ರ ಪ್ರಮುಖ ದಿನಕರ ಕುಲಾಲ್, ಪಡoಗಡಿ ಶಕ್ತಿ ಕೇಂದ್ರ ಪ್ರಮುಖ ಅಶ್ವಿತ್ ಓಡೀಲು, ಪ್ರಭಾರಿ ಜನಾರ್ದನ ಕುಕ್ಕೆಡಿ, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here