
ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವುದಲ್ಲದೆ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದು, ಕೆಲವು ದಿನಗಳ ಬಳಿಕ ಬಾಲಕಿ ಹೊಟ್ಟೆ ನೋವು ಎಂದು ಮನೆಯವರಿಗೆ ತಿಳಿಸಿದಾಗ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಪೋಷಕರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪುದುವೆಟ್ಟು ಗ್ರಾಮದ ಮೇಲಡ್ಕ ನಿವಾಸಿ ರಾಘವ ಗೌಡರ ಮಗ ವೃತ್ತಿಯಲ್ಲಿ ಪೈಂಟಿಂಗ್ ಮತ್ತು ಚಾಲಕ ಕೆಲಸ ಮಾಡುತ್ತಿದ್ದ ದಿನೇಶ್ ಗೌಡ(30) ಎಂಬಾತನ ವಿರುದ್ಧ ಪೋಕ್ಸೋ ಮತ್ತು ಅಟ್ರಾಸಿಟಿ ಅಡಿಯಲ್ಲಿ ಆ.11ರಂದು ಪ್ರಕರಣ ದಾಖಲಿಸಿ ತನಿಖೆ ಬಳಿಕ ಅರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.