






ಪದ್ಮುಂಜ: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಂಘ ಸದಸ್ಯರುಗಳು, ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು. ನಿರ್ದೇಶಕರು ವಕೀಲ ಉದಯ್ ಬಿ.ಕೆ. ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಂಕಿತಾ ಬಿ. ಅವರು ಕಾರ್ಯಕ್ರಮ ನಿರ್ವಹಿಸಿದರು.









