ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ರೂ. 33,333 ದೇಣಿಗೆ

0

ಕನ್ಯಾಡಿ: 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಆ .15ರಂದು ರೂ. 33,333/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಬೊಳ್ಮ, ಉಪಾಧ್ಯಕ್ಷ ಯತೀಶ್ ಸುವರ್ಣ, ಸಂಯೋಜಕ ರಾಜೇಂದ್ರ ಅಜ್ರಿ, ಉದ್ಘಾಟಕ ಲಯನ್ ದೇವದಾಸ ಎಲ್. ಶೆಟ್ಟಿ ಹಿಬರೋಡಿ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲುರಾಯ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ಪರಮೇಶ್ವರ, ಶಿವ ಪಾರ್ವತಿ ಕಲ್ಯಾಣ ಮಂಟಪ ಮಾಲಕ ಗಿರೀಶ್ ಕುದ್ರೆಂತ್ತಾಯ, ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ದೇವಸ್ಯ ಟಿ., ಬೃಂದಾವನ ಮನೆ ಕನ್ಯಾಡಿ 2 ಪವಿತ್ರ ಸುಕುಮಾರ ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಸದಸ್ಯ ವಸಂತ ನಾಯ್ಕ, ರೇವತಿ, ಎಸ್. ಡಿ. ಎಂ. ಸಿ. ಅಧ್ಯಕ್ಷ ಕೆ. ನಂದ, ಕನ್ಯಾಡಿ -2 ಪ್ರ.ಮು.ಶಿ ಪುಷ್ಪಾ ಎನ್. ಅವರು ಉಪಸ್ಥಿತರಿದ್ದರು. ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕರಾವ್ ಅವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here