ಬೆಳ್ತಂಗಡಿ: ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರು

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ವಕೀಲರ ಜೊತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆ.24 ರಂದು ಮಾಧ್ಯಾಹ್ನ 1 ಗಂಟೆಗೆ ಹಾಜರಾಗಿದ್ದಾರೆ.

ಘಟನೆಯ ವಿವರ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದರು. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀ‌ರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ ಪೆಕ್ಟ‌ರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್‌ ಜಾರಿ ಮಾಡಿತ್ತು. ಅದೇ ರೀತಿ ಆ.24ರಂದು ವಕೀಲರ ಜೊತೆ ಸಮೀರ್ ಎಂ.ಡಿ. ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here