ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಸ್ವರಾಜ್ ಟವರ್ಸ್ ಶ್ರೀಗುರು ಸಭಾಭವನದಲ್ಲಿ ಸೆ.5ರಂದು ನಡೆಯಿತು.
ವರದಿ ಸಾಲಿನಲ್ಲಿ ಸಂಘದಲ್ಲಿ 3758 ಸದಸ್ಯರನ್ನು ಹೊಂದಿದ್ದು.5,56,60,455 ಕೋಟಿ ಪಾಲು ಬಂಡವಾಳ ಸಂಗ್ರಹ ವಾಗಿರುತ್ತದೆ. 33,03,44,688 ಕೋಟಿ ಠೇವಣಿ ಸಂಗ್ರಹಿಸಿ ಒಟ್ಟು ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 35.21 ಕೋಟಿ ಸಾಲ ಪಡೆದು, 63.04 ಕೋಟಿ ಸದಸ್ಯರು ಸಾಲ ಪಡೆದುಕೊಂಡಿದ್ದಾರೆ. 63,03,82,742 ಕೋಟಿ ಹೊರ ಬಾಕಿ ಸಾಲ ಹೊಂದಿದೆ.

ವರದಿ ವರ್ಷದಲ್ಲಿ ಸದಸ್ಯರಿಗೆ ಪಡಿತರ ವಿತರಣೆ, ರಾಸಾಯನಿಕ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಿ 13,74,960 ವ್ಯಾಪಾರ ಲಾಭ ಗಳಿಸಿದೆ. ಇದರಿಂದ ಒಟ್ಟು 461 ಕೋಟಿ ವ್ಯವಹಾರ ನಡೆಸಿ ರೂ. 1.85ರಷ್ಟು ಲಾಭಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಸಭೆಯಲ್ಲಿ ತಿಳಿಸಿದರು.
ಸಾಮಾಜಿಕ ಚಟುವಟಿಕೆಗಳಿಗೆ 2,68,900 ಲಕ್ಷ ಧನ ಸಹಾಯ ವಿತರಿಸಿದೆ ಎಂದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ, ನಿರ್ದೇಶಕರಾದ ಗುರುಪ್ರಸಾದ್, ವಿಶ್ವನಾಥ ಹೊಳ್ಳ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ಕೆ., ದೇಜಪ್ಪ ಪೂಜಾರಿ, ಕೊರಗಪ್ಪ, ಸುಂದರಿ, ಮಮತಾ, ಧರ್ಣಪ್ಪ, ಡಿ.ಸಿ.ಸಿ. ಬ್ಯಾಂಕ್ ಪ್ರತಿನಿಧಿ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು, ಸದಸ್ಯರು ಭಾಗವಹಿಸಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ವರದಿ ಮಂಡಿಸಿದರು. ಸಿಬಂದಿಗಳಾದ ಸತೀಶ್ ಕೆ., ಪ್ರಶಾಂತ್ ಎಸ್, ಭರತ್ ರಾಜ್, ಜಗದೀಶ್ ಶೆಟ್ಟಿ, ಮಮತಾ, ಸಂತೋಷ್, ಹರೀಶ್ ನಾಯ್ಕ, ಯತೀಶ್, ದಿನೇಶ್, ಪ್ರವೀಣ ಕೆ., ಶ್ರೀದೇವಿ, ಸುಮಲತಾ, ಸಹಕರಿಸಿದರು. 14ಜನ ವಿವಿಧ ಸಾಧಕ ಕೃಷಿಕರಿಗೆ ಸನ್ಮಾನಿಸಲಾಹಿತು.2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಮತ್ತು ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸೇನೆಗೆ ಸೇರಿದ ಸಂಘದ ಸದ್ಯರ ಮಕ್ಕಳಿಗೆ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ, ಸಂಘದ ವ್ಯಾಪ್ತಿಯ ಶೇ. 100ಫಲಿತಾಂಶ ಪಡೆದ ಸಂತ ಪೀಟರ್ ಶಾಲೆ ಅಳದಂಗಡಿ, ಸ.ಹಿ. ಪ್ರಾಥಮಿಕ ಶಾಲೆಗೆ ಸನ್ಮಾನ, ಸಂಘದ ಕಾರ್ಯವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷ, ಕಾರ್ಯದರ್ಶಿಯವರಿಗೆ ಸನ್ಮಾನ ನಡೆಯಿತು.