ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಓಟ್ ಚೋರ್ ಗದ್ದಿ ಚೋರ್ – ಮತಗಳ್ಳತನ ನಿಲ್ಲಿಸಿ, ಜನಾದೇಶ ಕಗ್ಗೊಲೆ ನಿಲ್ಲಿಸಿ ಅಭಿಯಾನ

0

ಬೆಳ್ತಂಗಡಿ: ಕೆಪಿಸಿಸಿ ನಿರ್ದೇಶನದಂತೆ ಡಿ.ಸಿ.ಸಿ.ಯ ಸಹಕಾರದೊಂದಿಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಮತಗಳ್ಳತನ ನಿಲ್ಲಿಸಿ ಜನಾದೇಶ ಕಗ್ಗೊಲೆ ನಿಲ್ಲಿಸಿ ಎಂಬ ಅಭಿಯಾನವನ್ನು ನಡೆಸಲಾಯಿತು. ಹಾಗೂ ಬೂತ್ ಪ್ರಗತಿ ಸಭೆಯು ಮುಂಡಾಜೆ ನಡೆಯಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಕೆ.ಪಿ.ಸಿ.ಸಿ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿ ಝಿನತ್ ಉಜಿರೆ, ಸೇವಾದಳ ಗ್ರಾಮೀಣ ಅಧ್ಯಕ್ಷ ಪ್ರದೀಪ್ ಕೆ.ಸಿ., ಬೆಳ್ತಂಗಡಿ ತಾಲೂಕು ಕೆಡಿಪಿ ಸದಸ್ಯ ನಾಮ್ ದೇವ್, ಗ್ರಾಮ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ದೇವಸ್ಯ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಪ್ರದಾನ ಕಾರ್ಯದರ್ಶಿ ಎಂ.ಎಚ್. ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಗ್ರಾಮೀಣ ಮಹಿಳಾ ಘಟಕದ ಅಧ್ಯ ಶೋಭಾ ನಾರಾಯಣ ಗೌಡ ಹಿರಿಯ ಕಾಂಗ್ರೆಸ್ ಮುಖಂಡರಾದ ಲೋಕೇಶ್ವರಿ ವಿನಯಚಂದ್ರ ಗ್ರಾಮೀಣ ಘಟಕದ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here