17ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಯಕ್ಷಿತಾ ಜೆ. ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮುಂಡಾಜೆ ಪ್ರೌಢಶಾಲೆಯ ಯಕ್ಷಿತಾ ಜೆ. ಅವರು ಚಿನ್ನದ ಪದಕ ಪಡೆದು ನ.7 ರಿಂದ 12 ತನಕ ಉತ್ತರಪ್ರದೇಶದ ಬರೇಲಿಯಲ್ಲಿ ನಡೆಯುವ 70ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ.

ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಜನಾರ್ಧನ ಗೌಡ ದಂಪತಿಗಳ ಪುತ್ರಿ ಆಗಿದ್ದು, ಬಂದಾರಿನಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ.ಎಸ್. ಹಾಗೂ ಸಂದೀಪ್ ಶೆಟ್ಟಿ ತರಬೇತಿ ನೀಡಿರುತ್ತಾರೆ. ಅವರ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here