ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಕಾರ್ಯಕ್ರಮದ ಬಿಡುಗಡೆ ಕಾರ್ಯಕ್ರಮ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿದ ನಂತರ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜೈರಾಜ್ ಸೋಮ ಸುಂದರಂ ಬಿಡುಗಡೆಗೊಳಿಸಿದರು. ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಉಪಸ್ಥಿತರಿದ್ದರು.

ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಪ್ರಾಸ್ತಾವಿಕವಾಗಿ ಮಾತನಾಡಿ ಗೆಜ್ಜೆಗಿರಿ ಯಾತ್ರಿ ನಿವಾಸ ವಿಶ್ವಾದ್ಯಂತ ಇರುವ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿಯ ಭಕ್ತರಿಗೆ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿದೆ. ಶ್ರೀ ಕ್ಷೇತ್ರದ ಭಕ್ತರು ಸರ್ವ ರೀತಿಯ ಸಹಕಾರ ನೀಡ ಬೇಕು ಎಂದರು. ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ವಿಶ್ವದ ಬಿಲ್ಲವರು ಸೇರಿ ನಿರ್ಮಿಸಿದ ಗೆಜ್ಜೆಗಿರಿ ಕ್ಷೇತ್ರ ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಗೆಜ್ಜೆಗಿರಿ ಕ್ಷೇತ್ರದ ಪ್ರಾರಂಭದ ದಿನಗಳಿಂದ ಕ್ಷೇತ್ರದ ಭಕ್ತರ ಪರವಾಗಿ ಕ್ಷೇತ್ರಾಡಳಿತ ಉತ್ತಮವಾಗಿ ಕೆಲಸ ಮಾಡಿದೆ ಎಂದರು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿಪೂಜಾರಿ ಚಿಲಿಂಬಿ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರಾಡಳಿತ ಸಮಿತಿ ಕೆಲಸ ಮಾಡಲಿದೆ ಎಂದರು.

ಕ್ಷೇತ್ರ ಅಭಿವೃದ್ಧಿ ಟ್ರಸ್ಟ್ ನ ಕೋಶಾಧಿಕಾರಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಜಗೋಳಿ,ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಜೊತೆ ಕಾರ್ಯದರ್ಶಿ ಜಯವಿಕ್ರಂ ಕಲ್ಲಾಪು, ಪ್ರಮುಖರಾದ ಶೈಲೇಂದ್ರ ಸುವರ್ಣ, ಸುಜಿತ ವಿ ಬಂಗೇರ, ಜಯಾನಂದ ಪೂಜಾರಿ, ಲೀಲಾಕ್ಷ ಕರ್ಕೇರ, ಚಂದ್ರ ಶೇಖರ್ ಉಚ್ಚಿಲ್, ರಾಜೇಂದ್ರ ಚಿಲಿಂಬಿ, ಹರೀಶ್ ಕೆ. ಪೂಜಾರಿ, ನಾರಾಯಣ ಮಚ್ಚಿನ, ವಿದ್ಯಾ ರಾಕೇಶ್, ದಿನೇಶ್ ಅಂಚನ್, ಸುರೇಶ್ ಪೂಜಾರಿ, ಚಂದ್ರಶೇಖರ್ ಪೂಜಾರಿ ಬಂಟ್ವಾಳ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here