


ಪೆರಾಡಿ: ಸುಮಾರು 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರನ್ನು ಆಯ್ಕೆ ಪ್ರಶಸ್ತಿ ಪ್ರಧಾನ ಸಮಾರಂಭ ನ.14ರಂದು ಬೆಂಗಳೂರಿನಲ್ಲಿ ನಡೆಯಿತು.




ಬೆಳ್ತಂಗಡಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ.ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿದರು.









