ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ-ಶಿಕ್ಷಕರ ಮಹಾಸಭೆ

0

ನ್ಯಾಯತರ್ಪು: ರಕ್ತೇಶ್ವರಿಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ-ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷ ಕೆ. ಕುಶಾಲಪ್ಪ ಗೌಡ ಅವರು ಸಭಾ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಇಂದಿರಾ, ಎಸ್.ಡಿ.ಎಮ್.ಸಿ ಮಾಜಿ ಅಧ್ಯಕ್ಷ ಯಾದವ ಗೌಡ, ರಕ್ತೇಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ಸುನೀತಾ, ಆಶಾ ಕಾರ್ಯಕರ್ತೆ ಶಶಿಕಲಾ, ಶಾಲಾ ನಾಯಕಿ ಆಧ್ಯಾ ಕೆ., ಉಪನಾಯಕಿ ಗೌತಮಿ, ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು ಭಾಗವಹಿಸಿದರು.

ಮಕ್ಕಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಲಕ್ಷ್ಮಣ ಗೌಡ ಅವರ ಪ್ರಾಯೋಜಕತ್ವದಲ್ಲಿ ಬಹುಮಾನ ವಿತರಿಸಲಾಯಿತು. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಚೈತ್ರಪ್ರಭಾ ಪ್ರಾಸ್ತಾವಿಕ ದೊಂದಿಗೆ ಸ್ವಾಗತಿಸಿ, ಮಕ್ಕಳ ದಿನಾಚರಣೆ ಮಹತ್ವ ತಿಳಿಸಿದರು. ಸಹಶಿಕ್ಷಕಿ ಲಾವಣ್ಯ ನಿರೂಪಣೆ ಮಾಡಿ ವಂದಿಸಿದರು.

LEAVE A REPLY

Please enter your comment!
Please enter your name here