




ಬೆಳಾಲು: ಮಾಯ ಅಂಗನವಾಡಿಯಲ್ಲಿ ಡಿ. 2ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಾಗೂ ವರ್ಗಾವಣೆಗೊಂಡ ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ ಇವರಿಗೆ ಸನ್ಮಾನ ಡಿ. 2 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪುಟಾಣಿ ಮಹಮದ್ ಸಯಿಂ ಅಧ್ಯಕ್ಷತೆ ವಹಿಸಿದ್ದರು.


ಗ್ರಾಮ ಪಂಚಾಯಿತಿಯ ಸದಸ್ಯೆ ಪ್ರೇಮ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಯಶೋದ, ಸ್ಥಳೀಯ ಮಾಯ ಉ. ಹಿ. ಪ್ರಾ. ಶಾಲಾ ಅಧ್ಯಾಪಕ ಯೋಗೀಶ್, ಮಾಯ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯನ್, ಆಶಾ ಕಾರ್ಯಕರ್ತೆಯರಾದ ಪ್ರೇಮ, ಶೀಲಾವತಿ, ಸಂಜೀವಿನಿ ಒಕ್ಕೂಟದ ಎಂಬಿಕೆ ಹರಿಣಾಕ್ಷಿ, ಸಮಿತಿಯ ಸದಸ್ಯ ಮೊಹಮ್ಮದ್ ಹಕ್ಕಿಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಕ್ಕಳ ತಾಯಂದಿರು, ಪೋಷಕರು, ಸ್ತ್ರೀ ಶಕ್ತಿ ಸದಸ್ಯರು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಮಕ್ಕಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಸಹಾಯಕಿ ಸುಜಾತ ಸಹಕರಿಸಿದರು. ಕಾರ್ಯಕರ್ತೆ ಭಾರತಿ ನಿರೂಪಿಸಿ, ಹರಿಣಾಕ್ಷಿ ಸ್ವಾಗತಿಸಿ, ಸುಕನ್ಯ ವಂದಿಸಿದರು.









