ಬೆಳ್ತಂಗಡಿ:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ಸ್ವಸ್ಥಾನಕ್ಕೆ ಮರಳುವಂತೆ ಎಂ.ಎಚ್ ಸುಧಾಕರ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಜಾರಿಗೊಳಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಹೋಗಿದ್ದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ. ಎಚ್ ಸುಧಾಕರ್ ಅವರು ಮತ್ತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧಿಕಾರಿಯಾಗಿ ಮರು ಅಧಿಕಾರ ವಹಿಸಿಕೊಂಡಿದ್ದಾರೆ