ಬೆಳ್ತಂಗಡಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಲಾಯಿಲದ ಕುಂಠಿನಿಯ ಬಡ ಕುಟುಂಬಗಳಿಗೆ ಬೆಳ್ತಂಗಡಿಯ ಲಯನ್ಸ್ ಕ್ಲಬ್ ವತಿಯಿಂದ ಮಿಕ್ಸಿ (ರುಬ್ಬುವ ಯಂತ್ರ) ಹಾಗೂ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ವಸಂತ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ರಾವ್ ಮುಂತಾದವರು ಇದ್ದರು.