ಬೆಳ್ತಂಗಡಿ: ಮೂಲತಃ ಪುತ್ತೂರಿನ ಬೋಳ್ಯಾರು ನಿವಾಸಿಯಾಗಿದ್ದು, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್ ರೈ ಇವರನ್ನು ಡಿ.5 ರಂದು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಎಸ್ಟಿ ಮೋರ್ಚಾ ಅಧ್ಯಕ್ಷ ಚೆನ್ನಕೇಶವ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಉಪಾಧ್ಯಕ್ಷರಾದ ಸೀತಾರಾಮ ಬಿ.ಎಸ್, ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ತಾ.ಪಂ ಸದಸ್ಯೆ ವಸಂತಿ ಮಚ್ಚಿನ, ಪುಷ್ಪಾ ಆರ್.ಶೆಟ್ಡಿ, ನಪಂ ಅಧ್ಯಕ್ಷೆ ರಜನಿ ಕುಡ್ವ, ಪ್ರಮುಖರಾದ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಚಂದ್ರಶೇಖರ ಮಚ್ಚಿನ, ರಾಜೇಶ್ ಪೆಂರ್ಬುಡ, ನಂದಕುಮಾರ್, ಉಪಸ್ಥಿತರಿದ್ದರು.