ಸಹಕಾರಿ ಸಂಘಗಳು ಜನರ ಆರ್ಥಿಕ ಅಭಿವೃದ್ಧಿಗೆ ಪೂರಕ: ಹರೀಶ್ ಪೂಂಜ
ಧರ್ಮಸ್ಥಳ: ಸಹಕಾರಿ ಸಂಘಗಳು ಗ್ರಾಮದ ಜನರ ಆರ್ಥಿಕತೆಯನ್ನು ಬಲಪಡಿಸುವಲ್ಲಿ ನಿರ್ಣಾಯಕವಾಗಿರುತ್ತವೆ. ಸಹಕಾರಿ ಸಂಘಗಳು ಆರ್ಥಿಕ ವ್ಯವಹಾರದ ಜತೆ ಜನರಿಗೆ ಉಪಯೋಗವಾಗುವ ಅನೇಕ ಸೇವೆಗಳನ್ನು ನೀಡುತ್ತಿರುವುದು ಶ್ಲಾಘನೀಯ. ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗೂ ಸದಸ್ಯರು ಸಂಘದ ಏಳಿಗೆಯ ಅಡಿಪಾಯವನ್ನು ಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಫೆ.17 ರಂದು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೂ.4.25ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳ ಕ್ಷೇತ್ರದ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ಜಯಾ ಎಂ. ಗೌಡ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪುದುವೆಟ್ಟು ಗ್ರಾಪಂ ಅಧ್ಯಕ್ಷ ಯಶವಂತ್, ಜಮಾ ಉಗ್ರಾಣದ ಮುತ್ಸದ್ದಿ ಬಿ.ಭುಜಬಲಿ, ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ, ಇಂಜಿನಿಯರ್ ಯತೀಶ್ ಕುಮಾರ್, ಧರ್ಮಸ್ಥಳ ಸಹಕಾರಿ ಸಂಘದ ಉಪಾಧ್ಯಕ್ಷ ಶ್ರೀಪತಿ ಹೆಬ್ಬಾರ್, ಸಂಘದ ನಿರ್ದೇಶಕರು, ಸದಸ್ಯರು, ಗ್ರಾಹಕರು, ಗ್ರಾಪಂ ಸದಸ್ಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಕಾರ್ಯಕ್ರಮ ನಿರ್ವಹಿಸಿದರು.