ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ದೇವಸ ನಿವಾಸಿಯಾಗಿರುವ ರೌಡಿ ಶೀಟರ್ ಕಿರಣ್ ಗೌಡ ಎಂಬವರು ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಇನ್ನೊಂದು ಗ್ಯಾಂಗಿನ ಮೇಲೆ ದಾಳಿ ನಡೆಸುವ ಸಂಚನ್ನು ಗುಂಪೊಂದು ರೂಪಿಸಿತ್ತು. ಇದರ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು ಸಂಚುಕೋರರನ್ನು ಬೆನ್ನಟ್ಟಿ ಮಾರ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದರು. ಒಟ್ಟು 11 ಮಂದಿಯನ್ನು ಬಂಧಿಸಲಾಗಿದ್ದು, ಅದರಲ್ಲಿ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ದೇವಸ ನಿವಾಸಿ ಕಿರಣ್ ಗೌಡ ಎಂಬಾತ ಸೇರಿದ್ದಾನೆಂದು ತಿಳಿದು ಬಂದಿದೆ. ಕಿರಣ್ ಗೌಡ ರವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಒಟ್ಟು 9 ಕೇಸುಗಳು ದಾಖಲಾಗಿದೆ.