ಬೆಳ್ತಂಗಡಿ: ಸುದ್ದಿಯ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ,ಉತ್ತಮ ಸೇವೆಗೆ ಪುರಸ್ಕಾರ ಎನ್ನುವ ಘೋಷಣೆಯೊಂದಿಗೆ ಹೊರಟು , ಸುದ್ದಿ ಆಂದೋಲನದ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಜ. 14 ರಂದು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಂಚ ಭ್ರಷ್ಟಾಚಾರ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ ಕಾರ್ಯಕ್ರಮ ದಲ್ಲಿ ಡಾ.ಯು.ಪಿ.ಶಿವನಾಂದರು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.
ಈ ವೇಳೆ ವಿದ್ಯಾರ್ಥಿಗಳು ಭ್ರಷ್ಟಾಚಾರದ ವಿರುದ್ದ ಘೋಷಣೆಯನ್ನು ಕೂಗಿದರು. ವೇದಿಕೆಯಲ್ಲಿ ಪ್ರಾಂಶುಪಾಲರು ಯದುಪತಿ ಗೌಡ , ಉಪಪ್ರಾಂಶುಪಾಲರು ವಿಷ್ಣುಪ್ರಕಾಶ್, ಉಪನ್ಯಾಸಕಿ ಮೀನಾಕ್ಷಿ ಉಪಸ್ಥಿತರಿದ್ದರು.
ಈ ವೇಳೆ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಾಮಫಲಕವನ್ನು ಹಸ್ತಾಂತರಿಸಲಾಯಿತು.