ಬೆಳ್ತಂಗಡಿ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಸಿಎನ್ಜಿ, ಪಿಎನ್ಜಿ ಹಾಗೂ ಅಡುಗೆ ಎಣ್ಣೆ ಮತ್ತಿತರ ಅಗತ್ಯ ವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಳಗೊಂಡಿರುವ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಈ ಹಿಂದೆಂದೂ ಕಂಡಿರದಷ್ಟು ಏರಿಕೆ ಕಂಡಿವೆ. ತೈಲ ಬೆಲೆ ಏರಿಕೆಯಿಂದ ಮದ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಈ ಬೆಲೆ ಏರಿಕೆಯನ್ನು ತಡೆಯಬೇಕು ಎಂದು ಬೈಕ್, ಸ್ಕೂಟರ್ ಅಣಕು ಶವ ಯಾತ್ರೆ, ಸಿಲಿಂಡರ್ ಗಳಿಗೆ ಮಾಲಾರ್ಪಣೆ, ತಳ್ಳುಗಾಡಿ ಮೇಲೆ ಸಿಲಿಂಡರ್ ಇರಿಸಿ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.