ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ ಒಂದರಿಂದ ಇಂದಿನವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಮಧ್ಯಪ್ರಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ಆ ಗಡುವು ಮುಗಿಯುತ್ತಿದ್ದು ಸುತ್ತಮುತ್ತಲು ಇನ್ನೂ ಪ್ರಕ್ಷುಬ್ದ ವಾತಾವರಣ ಮನೆ ಮಾಡಿದೆ ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ಅಧೀಕ್ಷಕರು ಇನ್ನು ಕೆಲವು ದಿನಗಳ ಕಾಲ ದಕ್ಷಿಣ ಕನ್ನಡದಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು ಈ ಮನವಿಯನ್ನ ಪುರಸ್ಕರಿಸಿದ ಜಿಲ್ಲಾಧಿಕಾರಿ ಮತ್ತೆರಡು ದಿನಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದೆ.
ಆದುದರಿಂದ ಮಧ್ಯ ಮಾರಾಟ ಚಟುವಟಿಕೆಗಳನ್ನು ನಿರ್ಬಂಧಿಸಿ ಸಂಪೂರ್ಣವಾಗಿ ಎಲ್ಲಾ ರೀತಿಯ ಮಧ್ಯದ ವ್ಯವಹಾರಗಳನ್ನು ಅಗಸ್ಟ್ 5 ರಿಂದ ಬೆಳಗ್ಗೆ 9 ರ ತನಕ ಬಂದ್ ಮಾಡಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.