Site icon Suddi Belthangady

ಗುರುವಾಯನಕೆರೆ ಸೋಮನಾಥ ನಾಯಕ್‌ರಿಗೆ ಪ್ರತಿಷ್ಠಿತ `ಪ್ರೆಸ್‌ಕ್ಲಬ್ ಕೌನ್ಸಿಲ್ ಆವಾರ್ಡ್’ ಪ್ರಶಸ್ತಿ


ಬೆಳ್ತಂಗಡಿ: ವಿಶೇಷ ಸಾಧನೆ ಮಾಡಿರುವವರಿಗೆ ಪ್ರೆಸ್ ಕ್ಲಬ್ ಕೌನ್ಸಿಲ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ `ಪ್ರೆಸ್ ಕ್ಲಬ್ ಕೌನ್ಸಿಲ್ ಆವಾರ್ಡ್’ ಪ್ರಶಸ್ತಿಗೆ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಅವರು ಪಾತ್ರರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆ.4ರಂದು ಬೆಂಗಳೂರು ಗಾಂಧಿ ಭವನದಲ್ಲಿ ನಡೆದಿದೆ. ಗುರುವಾಯನಕೆರೆಯಲ್ಲಿ ನಾಗರಿಕ ಸೇವಾ ಟ್ರಸ್ ಸಂಸ್ಥೆಯನ್ನು ಸ್ಥಾಪಿಸಿ ಹಲವಾರು ಜನಪರ ಹಾಗೂ ಪರಿಸರ ಪರ ಹೋರಾಟಗಳನ್ನು ಸಂಘಟಿಸಿದ್ದ ಸೋಮನಾಥ ನಾಯಕ್ ಅವರ ಸಾಧನೆಯನ್ನು ಗುರುತಿಸಿ ಪ್ರೆಸ್‌ಕ್ಲಬ್ ಕೌನ್ಸಿಲ್ ಅವರನ್ನು ಈ ವರ್ಷದ ಪ್ರೆಸ್‌ಕ್ಲಬ್ ಕೌನ್ಸಿಲ್ ಅವಾರ್ಡ್‌ಗೆ ಆಯ್ಕೆ ಮಾಡಿದೆ.

Exit mobile version