Site icon Suddi Belthangady

ರೈತ ಸಂಘ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಕೋಟ್ಯಾನ್ ರಾಜೀನಾಮೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರೈತ ಸಂಘ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಳೆದ ಒಂದು  ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಪ್ರಶಾಂತ್ ಕೋಟ್ಯಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಸೇವಾ ಅವಧಿಯಲ್ಲಿ ತಾಲೂಕಿನಲ್ಲಿ ಕೆಲ ಜನಪರ ಹೋರಾಟಗಳನ್ನು ಸಂಘಟಿಸಿದ್ದ ಇವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ರಾಜ್ಯಾಧ್ಯಕ್ಷರಿಗೆ ಕಳುಹಿಸಿದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Exit mobile version