ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆ.7 ರಂದು ಸಂತ ಪಾವ್ಲರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಾರಾವಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಾಥಮಿಕ ಬಾಲಕರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ಬಾಲಕರು ಸಾಕ್ಷತ್ ಶೆಟ್ಟಿ , ಸ್ವಸ್ತಿಕ್ ಆರ್, ತಿಲಕ್ ರಾಜ್, ಇವರು ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ದೈಹಿಕ ಶಿಕ್ಷಣ ಶಿಕ್ಷಕ ವಸಂತ ಹೆಗ್ಡೆ ಹಾಗೂ ಗಿರೀಶ ರವರು ತರಬೇತಿ ನೀಡಿರುತ್ತಾರೆ.