ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಚಿನ್ನದ ಪದಕ ಪಡೆದುಕೊಂಡ ಕೊಯ್ಯೂರು ನಿವಾಸಿ ಸಹನ ಆರ್ ಭಟ್

0

ಕೊಯ್ಯೂರು: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೆ.11 ರಂದು ಸುರತ್ಕಲ್ ನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಹನ ಆರ್ ಭಟ್ ಕೊಯ್ಯೂರು ಕಟ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಆ.14ರಂದು ಬೆಂಗಳೂರಿನಲ್ಲಿ ನಡೆದ 10ನೇ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಚಂದ್ರಶೇಖರ್ ಕನಕಮಜಲು ಇವರಲ್ಲಿ ತರಬೇತಿ ಪಡೆಯುತ್ತಿದ್ದು, ಎಸ್ ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here