ದೇವಸ್ಥಾನಗಳ ಸುವ್ಯವಸ್ಥಿತ ಕಾರ್ಯನಿರ್ವಹಣೆಗೆ ದೇವಸ್ಥಾನ ಪರಿಷತ್ ಸ್ಥಾಪಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಸನಾತನ ಸಂಸ್ಥೆ

0

ಬೆಳ್ತಂಗಡಿ: ಈ ದೇಶದಲ್ಲಿ ಅನೇಕ ದೇವಸ್ಥಾನಗಳು ಹಿಂದೂ ಭಕ್ತರ ಕೈಯಲ್ಲಿದೆ. ದೇವಸ್ಥಾನಗಳ ನಿಧಿಯ ಉಪಯೋಗ, ದೇವಸ್ಥಾನದ ಕಾರ್ಯನಿರ್ವಹಣೆ, ದೇವಸ್ಥಾನದ ಪೂಜಾ ಕೈಂಕರ್ಯ ಹಾಗೂ ದೇವಸ್ಥಾನಗಳಿಂದ ಮಾಡಬೇಕಾದ ಧರ್ಮಕಾರ್ಯಗಳ ಬಗ್ಗೆ ರಾಷ್ಟ್ರಾದ್ಯಂತ ದೇವಾಲಯಗಳ ಪರಿಷತ್ ಮಾಡುವ ಉದ್ದೇಶದಿಂದ ದೇವಸ್ಥಾನಗಳ ಮುಖ್ಯಸ್ಥರಿಗಾಗಿ ಶಿಬಿರಗಳ ಆಯೋಜನೆ ಗಳನ್ನು ಮಾಡಲಾಗುತ್ತದೆ. ಈ ನಿಮಿತ್ತ ಇದರ ಚಾಲನೆಯನ್ನು ನೀಡಲು ಮತ್ತು ಮಾರ್ಗದರ್ಶನವನ್ನು ಪಡಿಯಲು ರಾಜ್ಯ ಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರನ್ನು ಸನಾತನ ಸಂಸ್ಥೆಯ ವಕ್ತಾರರಾದ ಚೇತನ ರಾಜಹಂಸ ಇವರು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ  ಗುರುಪ್ರಸಾದ್ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯರಾದಂತಹ  ಚಂದ್ರ ಮೊಗೇರ, ಸನಾತನ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಗಳ ಧರ್ಮ ಪ್ರಸಾರಕರಾದಂತಹ ಮಂಜುಳ ಗೌಡ ಹಾಗೂ ಇತರ ಸಾಧಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ  ವೀರೇಂದ್ರ ಹೆಗ್ಗಡೆಯವರು, ಧರ್ಮಸ್ಥಳ ಕ್ಷೇತ್ರದ ಟ್ರಸ್ಟಿನ ಮುಖಾಂತರ ಮುದ್ರಣಗೊಂಡ ಕಿರು ಪುಸ್ತಕವನ್ನು ತೋರಿಸಿ ಅವರು ಮಾಡಿದ ಕಾರ್ಯದ ಬಗ್ಗೆ ವಿಶ್ಲೇಷಣೆಯನ್ನು ನೀಡಿದರು, ಹಾಗೂ ನೀವು ಮಾಡುವ ಮಂದಿರ ಪರಿಷತ್ ಕಾರ್ಯಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಹೇಳುತ್ತ ಆಶೀರ್ವಾದವನ್ನು ನೀಡಿದರು.

LEAVE A REPLY

Please enter your comment!
Please enter your name here