ಉಜಿರೆ : ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಎದುರಿನ ಬಳಿ ಇರುವ ಹತ್ತಿಯ ಬೆಡ್ ಮಾರ್ಟ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬಿದ್ದಿರುವ ಘಟನೆ ಸೆ.20ರಂದು ನಡೆದಿದೆ.
ಅಲ್ಲೇ ಪಕ್ಕದಲ್ಲೇ ಇರುವ ಅಂಗಡಿಗಳಿಗೂ ಬೆಂಕಿ ತಗುಲಿದೆ. ಈ ಘಟನೆಯಿಂದ ಉಜಿರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ. ತಕ್ಷಣ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಉಜಿರೆಯಲ್ಲಿ ತಿಂಗಳ ಹಿಂದೆ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಪಿಡಿಓ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.