ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆಯು ಸೆ.21 ರಂದು ಬಸ್ ನಿಲ್ದಾಣದಲ್ಲಿ ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ , ಶಾಲಾ ಶಿಕ್ಷಕಿಯರಾದ ದೀಕ್ಷಾ ಮೋಹಿನಿ ಹಾಗೂ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು.