ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಇದರ ವಾರ್ಷಿಕೋತ್ಸವ, ಭಜನಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸತ್ಯನಾರಾಯಣ ಪೂಜೆಯು ಸೆ 27 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಸಭಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಗತಿರ ಕೃಷಿಕ ವಿಶ್ವನಾಥ ಹೊಳ್ಳ,ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ,ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಬಳಂಜ ಗ್ರಾ.ಪಂ ಮಾಜಿ ಉಪಾದ್ಯಕ್ಷ ಸದಾನಂದ ಸಾಲಿಯಾನ್ ಬಳಂಜ,ಗುರುವಾಯನಕೆರೆ ಕೆನರಾ ಬ್ಯಾಂಕ್ ಮ್ಯಾನೇಜರ್ ಚಿನ್ನ ಕಂಬಗಿರಿ, ಭಜನೆ ಗುರು ವಿಜಯ್ ನೀರ್ಕೆರೆ ಕಟೀಲು,
ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬ್ರಹ್ಮ ಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ ತಿಳಿಸಿದ್ದಾರೆ.