Site icon Suddi Belthangady

ರಾಮಮಂದಿರ -ನೆರೋಳ್ ಪಲ್ಕೆ ಕಾಂಕ್ರೀಟ್ ರಸ್ತೆ ಉದ್ಘಾಟನೆ


ಧರ್ಮಸ್ಥಳ :ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ರಾಮ ಕ್ಷೇತ್ರ ರಾಮ ಮಂದಿರದ ಎದುರುಗಡೆಯಿಂದ ನೆರೋಳ್ ಪಲ್ಕೆ ಕಾಂಕ್ರೀಟ್ ರಸ್ತೆಯನ್ನು ಸೆ.24 ರಂದು ಶಾಸಕ ಹರೀಶ್ ಪೂಂಜಾ ಉದ್ಘಾಟನೆ ಮಾಡಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಂಚಾಯತ್ ಸದಸ್ಯ ವಸಂತ ನಾಯ್ಕ, ಮಾಜಿ ಸದಸ್ಯೆ ರವಿಜಾ ರಾವ್, ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್, ಶಿವಳ್ಳಿ ಬ್ರಾಹ್ಮಣ ಸಂಘದ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ, ಸೇವಾ ಭಾರತಿ ಅಧ್ಯಕ್ಷ ವಿನಾಯಕ ರಾವ್ ಇನ್ನಿತರು ಉಪಸ್ಥಿತರಿದ್ದರು.

ಬ್ರಾಹ್ಮಣ ಸಂಘ, ಅಯ್ಯಪ್ಪ ದೇವಸ್ಥಾನದ ವತಿಯಿಂದ, ನೆಲೊಳ್ ಪಲ್ಕೆಜನತೆಯ ವತಿಯಿಂದ ಶಾಸಕರಿಗೆ ಗೌರವ ಹಾಗು ಸಹಕಾರ ನೀಡಿದ ರವಿಜಾ ರಿಗೆ ಸನ್ಮಾನ ಮಾಡಲಾಯಿತು. ಸಾರ್ವಜನಿಕರು ಊರವರು ಹಾಜರಿದ್ದರು. ನೀಲಕಂಠ ಶೆಟ್ಟಿ ನಿರೂಪಿಸಿದರು.

Exit mobile version