ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ ಸಭಾಂಗಣದಲ್ಲಿ ಸೆ.28 ರಂದು ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ವಿಶ್ವ ರೇಬೀಸ್ ದಿನ ಆಚರಣೆ ನಡೆಯಿತು.
ಪಟ್ಟಣ ಪಂಚಾಯತು ಉಪಾಧ್ಯಕ್ಷ ಜಯನಂದ ಗೌಡ ಸಭಾ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಸರ್ಜನ್ ಡಾ.ಯೋಗೀಶ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಬೆಳ್ತಂಗಡಿ ಮುಖ್ಯ ವೈದ್ಯಾಧಿಕಾರಿ ಡಾ. ಮಂಜು ನಾಯ್ಕ್,ಆಡಳಿತ ವೈದ್ಯ ಅಧಿಕಾರಿ ಡಾ.ಚಂದ್ರಕಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಾ ಪ್ರಾ.ಆ.ಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ ವಿಶ್ವ ರೇಬೀಸ್ ಬಗ್ಗೆ ಜಾಗೃತಿ ನೀಡಲಾಗುತ್ತದೆ. ಘೋಷಾ ವಾಕ್ಯ ಹೆಲ್ತ್-ನೋ ಡೇತ್.ಸಭೆಯಲ್ಲಿ ಘೋಷಿಸಿದರು.ಹಿರಿಯ ಹಾಗೂ ಕಿರಿಯ ಆರೋಗ್ಯ ಕಾರ್ಯಕರ್ತೆ ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಿ.ಹೆಚ್.ಇ.ಓ. ಅಮ್ಮಿ ಸಿಸ್ಟರ್ ಪ್ರಸ್ತಾವಿಕವಾಗಿ ಮಾತನಾಡಿದರು. ಅಜೇಯ್ ಕಾರ್ಯಕ್ರಮ ನಿರ್ವಹಿಸಿದರು.ಡಾ. ಪ್ರಕಾಶ್ (ಟಿ.ಹೆಚ್.ಓ.) ಧನ್ಯವಾದವಿತ್ತರು.