Site icon Suddi Belthangady

ನಾರಾವಿ: ಅರಸಿಕಟ್ಟೆ ಬಳಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವು

ನಾರಾವಿ: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ಅ.3ರಂದು ರಾತ್ರಿ ವೇಳೆ ನಡೆದಿದೆ.

ಮೃತ ಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23) ಎಂದು ಗುರುತಿಸಲಾಗಿದೆ.

ಮನೆಯಿಂದ ಅಲ್ಲೆ ಹತ್ತಿರವಿದ್ದ ಅಂಗಡಿಗೆ ಸಾಗುತ್ತಿದ್ದ ವೇಳೆ ಬೈಕ್ ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯವಾಗಿತ್ತು. ಅಲ್ಲೇ ಹತ್ತಿರವಿದ್ದ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಚಿಕಿತ್ಸೆಗೆಂದು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದೆ.

 

Exit mobile version