ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ರವರ ಮೇಲೆ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರಿನ ಫರ್ ನಿವಾಸಿ ರಿಯಾಜ್ (38) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಮತ್ತು ಆತನ ಮೇಲೆ ಯಾವುದೇ ಆಯುಧ ಪತ್ತೆಯಾಗಿಲ್ಲ. ಸ್ಕಾರ್ಪಿಯೋ ವಾಹನವನ್ನು ವಶಪಡಿಸಿ, ಹೆಚ್ಚಿನ ತನಿಖೆ ನಡೆಯುತ್ತಿದೆ.