Site icon Suddi Belthangady

ಗುರುವಾಯನಕೆರೆ : ಕೃಷಿ ಕುರಿತ ಮಾಹಿತಿ ಕಾರ್ಯಕ್ರಮ

ಗುರುವಾಯನಕೆರೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಡಂತ್ಯಾರ್ ಇದರ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾಳು ಮೆಣಸು ನಿರ್ವಹಣೆ ಮತ್ತು ಕಸಿ ಕಟ್ಟುವಿಕೆ ಮತ್ತು ಅಡಕೆ ಕೃಷಿ ನಿರ್ವಹಣೆ ಕೊಳೆರೋಗ ನಿಯಂತ್ರಣದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಪದೇಂಜಿಲಾ ಹರೀಶ್ ಶೆಟ್ಟಿ ಇವರ ಮನೆಯಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೀಶ್ ಶೆಟ್ಟಿ ಯವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಡಂತ್ಯಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಂಗೀತ ಶೆಟ್ಟಿ ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪದ್ಮನಾಭ ಸಾಲಿಯನ್ ಮತ್ತು ಮಡಂತ್ಯಾರ್ ಒಕ್ಕೂಟಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ತಾಲೂಕಿನ ಕೃಷಿ ಅಧಿಕಾರಿ ಭಾಸ್ಕರ್ ಪ್ರಾಸ್ತಾವಿಕ ಮಾತನ್ನಾಡಿದರು. ಉಜಿರೆ ಸಿದ್ದಾವನ ನರ್ಸರಿಯ ವಾಸು ಇವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ವಸಂತ  ನಿರೂಪಿಸಿದರು . ಸ್ವಾಗತವನ್ನು ಸೇವಾ ಪ್ರತಿನಿಧಿ ಹರಿಣಾಕ್ಷಿ ಮಾಡಿದರು. ಸೇವಾ ಪ್ರತಿನಿಧಿ ಶೋಭಾ ಇವರು ವಂದಿಸಿದರು.

Exit mobile version