Site icon Suddi Belthangady

ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತ: ಗಂಭೀರ ಗಾಯಗೊಂಡಿದ್ದ ಮೂಲತಃ ಧರ್ಮಸ್ಥಳ ನಿವಾಸಿ  ಪ್ರವೀಣ್ ಜೋಶಿ ಸಾವು

ಬಂಟ್ವಾಳ: ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೂಲತಃ ಧರ್ಮಸ್ಥಳ ನಿವಾಸಿ  ಪ್ರವೀಣ್ ಜೋಶಿ ಅ.21ರಂದು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರು  ಶ್ರೀ ಕ್ಷೇತ್ರ ಧರ್ಮಸ್ಥಳದ ಉಗ್ರಾಣದಲ್ಲಿ ಕರ್ತವ್ಯನಿರ್ವಹಿಸಿ ನಿವೃತ್ತಿಗೊಂಡ ನಾರಾಯಣ ಜೋಶಿ ಇವರ ಪುತ್ರ.

ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ ಪ್ರವೀಣ್ ಜೋಶಿ ಅವರು ಮಣಿಹಳ್ಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದು ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ಜೋಶಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

Exit mobile version