ವೇಣೂರು: ಬಿಜೆಪಿ ಎಸ್ಸಿ ಮೋರ್ಚಾ ದ.ಕ. ಜಿಲ್ಲೆ ಇದರ ವತಿಯಿಂದ ಉರ್ವಸ್ಟೋರ್ ಅಂಬೇಡ್ಕರ್ ಭವನ ನ. 11ರಂದು ನಡೆಯಲಿರುವ ಪರಿಶಿಷ್ಟ ಜಾತಿ ಸಮಾವೇಶ, ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜ ಅವರು ಅವರ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಗೋಪಾಲ್ ಕೃಷ್ಣ ಕುಕ್ಕಳ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಗರ್ಡಾಡಿ, ಉಪಾಧ್ಯಕ್ಷ ರಾಘವ ಕಲ್ಮಂಜ, ಸದಾಶಿವ ಕರಂಬಾರು, ಸಾಮಾಜಿಕ ಜಾಲತಾಣ ಸಂಚಾಲಕ ಶಿವಾನಂದ ಪಡಂಗಡಿ, ಕೊಯ್ಯೂರು ಗ್ರಾ.ಪಂ. ಅಧ್ಯಕ್ಷ ಜಗನಾಥ್, ಬೆಳ್ತಂಗಡಿ ಮಂಡಲ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಧರ್ಮರಾಜ್ ವೇಣೂರು, ಕಾರ್ಯದರ್ಶಿಗಳಾದ ಸುರೇಶ್ ಆರಂಬೋಡಿ, ರಾಮ್ ಪಡಂಗಡಿ ಮತ್ತಿತರರು ಉಪಸ್ಥಿತರಿದ್ದರು.