ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಆದೇಶದಂತೆ “ಕೋಟಿ ಕಂಠ ಗಾಯನ ನನ್ನ ನಾಡು ನನ್ನ ಹಾಡು” ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಹಮ್ಮಿಕೊಳ್ಳಲಾಗಿತ್ತು.
ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಪ್ರಸ್ತುತ ಕಾರ್ಯಕ್ರಮದ ಧ್ಯೆಯೋದ್ದೇಶ ವನ್ನು ತಿಳಿಸಿದರು. ಸಹಪ್ರಾಧ್ಯಾಪರಾದ ಡಾ. ಕೃಷ್ಣಪ್ರಸಾದ್ ಸಂಕಲ್ಪ ವಿಧಿಯನ್ನು ಭೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಗೀತೆಗಳನ್ನು ಹಾಡಿದರು.