ಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.1ರಂದು ನಡೆದಿದೆ.
ಅಮ್ಟಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಗಂಡು ಮಗನನ್ನು ಅಗಲಿದ್ದಾರೆ