ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾಂತಾರ ಸಿನಿಮಾ ನಿರ್ದೇಶಕ, ನಟ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ನ.2 ರಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಸೇವೆ, ಸರ್ವಸೇವೆ, ಶತರುದ್ರಾಭಿಷೇಕ, ಪವಮಾನಾಭಿಷೇಕ, ಗಣಪತಿ ಪಂಚಾಮೃತ ಸೇವೆಯನ್ನು ನೆರವೇರಿಸಿ ನಂತರ ಅಣ್ಣಪ್ಪಸ್ವಾಮಿ ಬೆಟ್ಟಕ್ಕೂ ಭೇಟಿ ನೀಡಿ ಅಣ್ಣಪ್ಪ ಸ್ವಾಮಿಗೆ ವಿಶೇಷ ಬಲಿವಾಡ ಸೇವೆಯನ್ನು ನೆರವೇರಿಸಿದರು.