ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಹಾಗೂ ಕಾಂತಾರ ಚಿತ್ರ ತಂಡದವರು ನ.2ರಂದು ಬೆಳ್ತಂಗಡಿ ತಾಲೂಕಿನ ಕಾರ್ಣಿಕ ಕ್ಷೇತ್ರವಾದ ಆರಿಕೋಡಿ ಶ್ರೀ ಚಾಮುಂಡೇಶ್ವರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸ್ಲಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮೋಕ್ತೆಸರರಾದ ಡೊಂಬಯ್ಯ ಗೌಡ, ಧರ್ಮದರ್ಶಿ ಹರೀಶ್ ಆರಿಕೋಡಿ, ಅವರು ನಟ ರಿಷಬ್ ಶೆಟ್ಟಿ ಮತ್ತು ತಂಡದವರನ್ನು ಗೌರವಿಸಿ ಶುಭ ಹಾರೈಸಿದರು.