ಬಂದಾರು: ಮೃತರ ಕುಟುಂಬಕ್ಕೆ ಸಹಾಯಹಸ್ತ

0


ಬಂದಾರು: ಬಂದಾರು ಗ್ರಾಮದ ಬೈಪಾಡಿ ನೇರೋಳ್ದಪಲಿಕೆ (ಪೆರ್ಲ) ಕಾಲೋನಿಯಲ್ಲಿ ಇತ್ತೀಚೆಗೆ ಆಕಸ್ಮಿಕವಾಗಿ ಮೃತರಾದ ಬಾಬು ಅವರ ತಾಯಿ ಚಂರ್ಬೆ ಅವರ ಕುಟುಂಬಕ್ಕೆ  ಶಾಸಕ ಹರೀಶ್ ಪೂಂಜರವರು ನೀಡಿದ ಧನ ಸಹಾಯ ಹಾಗೂ ಗ್ರಾಮಪಂಚಾಯತ್ ವತಿಯಿಂದ ತುರ್ತು ಸಹಾಯದ ನಿಧಿಯ ರೂ 3,000/- ದ ಚೆಕ್ ಬಂದಾರು ಗ್ರಾ.ಪಂ. ಅಧ್ಯಕ್ಷೆ  ಪರಮೇಶ್ವರಿ ಕೆ ಗೌಡ ಹಾಗೂ ಬೂತ್ ಪ್ರಮುಖರಾದ  ಹೊನ್ನಪ್ಪ ಗೌಡ ಅವರು ಮೃತರ ಕುಟುಂಬಕ್ಕೆ  ಹಸ್ತಾಂತರ ಮಾಡಿ, ಸಾಂತ್ವನ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ , ಗ್ರಾ.ಪಂ. ಸದಸ್ಯರಾದ  ಭಾರತಿ,  ಅನಿತಾ ಹಾಗೂ ಬೂತ್ ಮಟ್ಟದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here