ಬೆಳಾಲು: ಸ್ಪಂದನಾ ಸೇವಾ ಸಂಘದ 96ನೇ ಸೇವಾ ಯೋಜನೆಯ ಧನಸಹಾಯವನ್ನು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಕೆಲಸ ಮಾಡುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಗಾಡಿಯಿಂದ ಕಬ್ಬಿಣದ ಶೀಟ್ ಬಿದ್ದು ಬಲಕಾಲಿಗೆ ತೀವ್ರ ಗಾಯಗೊಂಡು ಸದ್ಯ ಚೇತರಿಸಿಕೊಳ್ಳುತ್ತಿರುವ ಬೆಳಾಲು ಗ್ರಾಮದ ಮಂಡಾಲು ನಿವಾಸಿ ಗಿರಿಜಾ ಇವರ ಮಗನಾದ ಚಿದಾನಂದ ಗೌಡ ಇವರಿಗೆ ಚಿಕಿತ್ಸಾ ಸಹಾಯಾರ್ಥವಾಗಿ ರೂ 15,000/- ದ ಚೆಕ್ಕನ್ನು ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟ ಪೂರ್ವ ಕಾರ್ಯದರ್ಶಿಗಳೂ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಪೆರ್ಲ, ನಿರ್ದೇಶಕರಾದ ಸುರೇಶ್ ಕೌಡಂಗೆ, ವಾಣಿ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ಹಾಗೂ ಸ್ಪಂದನಾ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.