ಸ.ಪ್ರ. ದ. ಕಾಲೇಜು ಪುಂಜಾಲಕಟ್ಟೆಯಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಬಗೆಗೆ ಮಾಹಿತಿ ಕಾರ್ಯಾಗಾರ

0

ಪುಂಜಾಲಕಟ್ಟೆ:  ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಡಿ.21 ರಿಂದ ಡಿ.27ರವರೆಗೆ  ಮೂಡಬಿದ್ರೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್ ಮತ್ತು ಗೈಡ್ ಸಾಂಸ್ಕೃತಿಕ ಜಾಂಬೂರಿಯ ಬಗ್ಗೆ ಮಾಹಿತಿಯನ್ನು ನೀಡಲು, ನ.3 ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ  ಭರತ್ ರಾಜ್ ಕೆ ಇವರು ಆಗಮಿಸಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಬಗ್ಗೆ ವಿವರವಾಗಿ ಮಾಹಿತಿಯನ್ನು ನೀಡಿದರು. ಹಾಗೂ ಕಾಲೇಜಿನ ಎಲ್ಲಾ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸುವಂತೆ ಎಲ್ಲರನ್ನು ಪ್ರೇರೇಪಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ಇವರು ಅಧ್ಯಕ್ಷೀಯ ಮಾತುಗಳನ್ನಾಡಿ, ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಸ್ಕೌಟ್ ಮತ್ತು ಗೈಡ್ಸ್ ನ‌ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್ ಕೆ. ಕಾಲೇಜಿನ ರೇಂಜರ್ ಲೀಡರ್ ಡಾ. ಪ್ರೀತಿ ಕೆ ರಾವ್, ಕಾಲೇಜಿನ ರೋವರ್ ಲೀಡರ್ ಪ್ರೊ. ಆಂಜನೇಯ ಎಂ ಎನ್. ರೋವರ್ಸ್ ಮತ್ತು ರೆಂಜರ್ಸ್ ಲೀಡರ್ ಆದ ಕೀರ್ತಿ ಮತ್ತು ತೃಪ್ತಿ ಹಾಗೂ ಕಾಲೇಜಿನ ಎಲ್ಲಾ ರೋವರ್ಸ್ ಮತ್ತು ರೇಂಜರ್ಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರೇಂಜರ್ ತೃಪ್ತಿ ಸ್ವಾಗತಿಸಿ, ರೇಂಜರ್ ಶೋಭಿತ ದನ್ಯವಾದಿಸಿದರು. ರೋವರ್ ಕೀರ್ತಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here