ವೇಣೂರು: ಇಲ್ಲಿಯ ಮೂಡುಕೋಡಿ ಗ್ರಾಮದ ಕೊಪ್ಪದ ಬಾಕಿಮಾರು ನಿವಾಸಿ, ವೇಣೂರು ಗ್ರಾ.ಪಂ.ನ ಮಾಜಿ ಸದಸ್ಯ, ವೇಣೂರು ಪ್ರಾ.ಕೃ.ಪ.ಸ. ಸಂಘದ ಮಾಜಿ ಉಪಾಧ್ಯಕ್ಷ ರಾಜು (47) ಅವರು ಜ್ವರ ಉಲ್ಬಣಗೊಂಡು ನ.12ರ ರಾತ್ರಿ ನಿಧನರಾದರು.
ನ.12ರಂದು ರಾಜು ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ರಾತ್ರಿ ಮತ್ತೆ ಜ್ವರ ಉಲ್ಬಣಗೊಂಡಿದ್ದು, ಮತ್ತದೇ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಬೆಳಿಗ್ಗೆ ಆಗುವುದರೊತ್ತಿಗೆ ರಾಜುರವರು ಇಹಲೋಕ ತ್ಯಜಿಸಿದ್ದಾರೆ.
ಮೃತರು ಪತ್ನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.