ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಮಕ್ಕಳ ಪೋಷಕರ ಸಭೆ

0

ಪುದುವೆಟ್ಟು:  ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಮಕ್ಕಳ ಪೋಷಕರ ಸಭೆಯು ನ.14ರಂದು ನಡೆಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಶೀನಪ್ಪ ಗೌಡ ರವರ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಮಾರು 75 ಮಂದಿ ಪೋಷಕರು ಈ ಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಮಾರ್ಗ ದರ್ಶನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತಾಡಿದ ಮಾನ್ಯ ಮುಖ್ಯ ಶಿಕ್ಷಕರು ಶಾಲೆಯ ಶೈಕ್ಷಣಿಕ ಪ್ರಗತಿಯ ಬಗ್ಗೆ ತಿಳಿಸಿದರು.

ಹಿರಿಯ ಶಿಕ್ಷಕರಾದ ಶ್ರೀ ಜೋಸೆಫ್ ರವರು ಈ ವರ್ಷ ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮ ದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಗಫುರ್ ರವರು ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕರಾದ ನಿಶಾಂತ್ ನಿರೂಪಿಸಿ, ಶ್ರೀಮತಿ ಸುಜಾತಾ ಸ್ವಾಗತಿಸಿ ಶ್ರೀಮತಿ ಶೀಲಾ ರವರು ಧನ್ಯವಾದ ಸಲ್ಲಿಸಿದರು.

ಇದೆ ವೇಳೆ ಮಕ್ಕಳ ಮೊದಲ ಸಂಕಲನಾತ್ಮಕ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಪೋಷಕರಿಗೆ ತೋರಿಸಲಾಯಿತು.

LEAVE A REPLY

Please enter your comment!
Please enter your name here