Site icon Suddi Belthangady

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಮತ್ತು ಸಹಾಯಕಿಗೆ ಸನ್ಮಾನ

ಕಳಿಯ: ಇಲ್ಲಿಯ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಸಹಾಯಕಿಗೆ ಸನ್ಮಾನ ಕಾರ್ಯಕ್ರಮ ನ.14 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು.

ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಭಾರತಿ ಬೇಬಿ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. ಕಳಿಯ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್, ಪಂಚಾಯತ್ ಮಾಜಿ ಸದಸ್ಯೆ ಮೋಹಿನಿ ಆನಂದ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ 11 ವರ್ಷಗಳ ಕಾಲ ಸೇವೆ ಸಲ್ಲಿಸಿ,ವರ್ಗಾವಣೆಗೊಂಡ ಸಹಾಯಕಿ ಶ್ರೀಮತಿ ವಾರಿಜ ಕೂಸಪ್ಪರನ್ನು ವೇದಿಕೆಯ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿ, ಗೌರವಿಸಿದರು. ಬಾಲವಿಕಾಸ ಸಮಿತಿ ಸದಸ್ಯರು ,ಮಕ್ಕಳ ಪೋಷಕರು ಹಾಗೂ ಸಹಾಯಕಿ ಭವ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ವಿಧ್ಯಾರ್ಥಿ ತನ್ವಿರ್ ಪೋಷಕರು ಜವಾಹರಲಾಲ್ ನೆಹರು ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.

ಪ್ರತಿ ತಿಂಗಳ ದಿನಾಂಕ 11 ರಂದು ಜನಿಸಿದ ಹೆಣ್ಣು ಮಗುವಿಗೆ ಸರಕಾರದಿಂದ ಕೊಡಮಾಡುವ” ಹೆಣ್ಣು ಮಕ್ಕಳ ರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ” ಅಭಿನಂದನಾ ಪತ್ರವನ್ನು ಫೌಹದ ಫಾತೀಮಾ ಮಗುವಿಗೆ ನೀಡಿದರು.
ರವಿಚಂದ್ರನ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version